3:25 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು ಆಯ್ಕೆ

01/12/2023, 08:39

ಮಂಗಳೂರು(reporterkarnataka.com):ಬಲ್ಯಾಯ ಯಾನೆ ಕಣಿಷನ್ ಮಹಾಜನ ಸಂಘದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು ಆಯ್ಕೆಯಾಗಿದ್ದಾರೆ.
ಇವರು ಹಲವಾರು ವರ್ಷಗಳಿಂದ ಕಾರ್ಯಕಾರಿ ಸಮಿತಿಯಲ್ಲಿ ಸಕ್ರಿಯ ಕಾರ್ಯದರ್ಶಿಯಾಗಿ ಸಂಘದ ಅನೇಕ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಕೊಂಡಿದ್ದರು. ಸ್ವಜಾತಿ ಬಾಂಧವರ ನೆಚ್ಚಿನ ಒಡನಾಡಿಯಾಗಿದ್ದು, ಸಂಘದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅನೇಕ ವರ್ಷಗಳಿಂದ ಕೋಶಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಸರಳ ಸ್ವಭಾವದ ಶಾಂತ ಸ್ವರೂಪಿಯಾದ ಅವರು ವೃತ್ತಿಯಲ್ಲಿ ಶಿಕ್ಷಕಿಯಾಗಿ ಪ್ರಾಮಾಣಿಕವಾಗಿ ದ. ಕ. ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ಶಿಕ್ಷಕಿ ಎಂಬ ಬಿರುದುಗಳಿಸಿ ಸನ್ಮಾನಿತರಾಗಿರುತ್ತಾರೆ. ಪ್ರಸ್ತುತ ಸ್ಯಾಂಡ್ಸ್ ಪಿಟ್ ಬೆಂಗ್ರೆ ಬೆಂಗ್ರೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ವಿದ್ಯಾರ್ಥಿಗಳ ಪ್ರೀತಿಯ ಉಮಾ ಟೀಚರ್.

ಇತ್ತೀಚಿನ ಸುದ್ದಿ

ಜಾಹೀರಾತು