9:54 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು