2:26 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ; ಸಬ್ ಇನ್ಸ್‌ಪೆಕ್ಟರ್ ಸಹಿತ 6 ಮಂದಿ ಪೊಲೀಸರ ಅಮಾನತು

01/12/2023, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ನಗರ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ.
ಓರ್ವ ಪಿಎಸ್‍ಐ, ಓರ್ವ ಎ.ಎಸ್.ಐ. ಓರ್ವ ಹೆಡ್ ಕಾನ್ಸಟೇಬಲ್ ಸೇರಿದಂತೆ ಮೂವರು ಪೇದೆಗಳನ್ನ ಅಮಾನತು ಮಾಡಿದ್ದಾರೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೈಕಿನ ಕೀ ಏಕೆ ತೆಗೆಯುತ್ತೀರಾ ಎಂದು ಪ್ರಶ್ನಿಸಿದ ವಕೀಲ ದಂಡ ಕಟ್ಟುತ್ತೇನೆ ಎಂದು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಠಾಣೆ ಎದುರೇ ಘಟನೆ ನಡೆದಿದ್ದರಿಂದ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆಂದು ವಕೀಲರ ಸಂಘ ಆರೋಪಿಸಿದೆ. ವಕೀಲ ಪ್ರೀತಂ ಎದೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಹೋಗಿ ಆತನನ್ನ ನೋಡಿಕೊಂಡು ಠಾಣೆಗೆ ಬಂದ ವಕೀಲರ ಸಂಘ ಇಡೀ ರಾತ್ರಿ ಪೊಲೀಸ್ ಠಾಣೆ ಮುಂದೆ ಬೀಡುಬಿಟ್ಟಿತ್ತು. ಅವರನ್ನ ಅರೆಸ್ಟ್ ಮಾಡಿ ಎಂದು ಆಗ್ರಹಿಸಿತ್ತು. ಆದರೆ, ಪೊಲೀಸರು ವಿಚಾರಣೆಗೊಳಪಡಿಸುತ್ತೇವೆ ಎಂದಾಗ ವಕೀಲರು ವಿಚಾರಣೆ ಬೇಡ ಕೇಸ್ ದಾಖಲಿಸಿ ಎಂದು ಬಂಧಿಸಿ ಎಂದು ಆಗ್ರಹಿಸಿದ್ದರು. ಪ್ರೀತಂ ಮೇಲೆ ಹಲ್ಲೆ ಮಾಡಿದ ಪೇದೆಯನ್ನ ಆಸ್ಪತ್ರೆಯಲ್ಲಿ ರಿಪೋರ್ಟ್ ತೆಗೆದುಕೊಳ್ಳು ಕಳಿಸಿದ್ದಾರೆ. ಇದು ವಕೀಲರ ಆಕ್ರೋಶಕ್ಕೆ ಕಾರಣವಾಗಿತ್ತು. 307 ಕೇಸ್ ದಾಖಲಾಗಿದೆ. ಆರೋಪಿಗಳು ಠಾಣೆಯ ಒಳಗೆ ಇದ್ದಾರೆ, ಬಂಧಿಸಿ ಎಂದು ಪಟ್ಟು ಹಿಡಿದಿದ್ದರು. ಸುಮಾರು ಆರು ಗಂಟೆಗಳ ವಕೀಲರ ಹೋರಾಟದ ಫಲವಾಗಿ ಎಸ್ಪಿ 6 ಮಂದಿ ಪೊಲೀಸರನ್ನ ಅಮಾನತು ಮಾಡಿ ವಿಚಾರಣೆಗೆ ಡಿ.ವೈ.ಎಸ್.ಪಿ. ನೇತೃತ್ವದ ತಂಡ ರಚಿಸಿದ್ದಾರೆ. ಆದರೆ, ವಕೀಲರ ಸಂಘ ಆರು ಜನರನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಆರು ಜನ ಅರೆಸ್ಟ್ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿರೋ ವಕೀಲರ ಸಂಘ ಹೋರಾಟವನ್ನ ಮುಂದುವರೆಸಲು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು