6:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ

01/12/2023, 23:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು.
ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿದರು.


ಕಡಕೋಳ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿರುವ ಸುಮಾರು ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬೃಹತ್ ಕಾರ್ಖಾನೆ ಕಟ್ಟಡಗಳು ಇದಾಗಿದೆ. ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾದ ಸಚಿವದ್ವಯರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ನಂತರ ಸಚಿವರುಗಳಾದ ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಮಾತನಾಡಿ, ಕೆಐ ಎಡಿಬಿ ವತಿಯಿಂದ ಸರ್ಕಾರ ನೀಡಿರುವ ಸಬ್ಸಿಡಿಯಿಂದ 2 ಎಕರೆ ಜಮೀನು ಪಡೆದು ಕೆ ಎಸ್ ಎಫ್ ಸಿ ಹಣಕಾಸು ಸಂಸ್ಥೆ ವತಿಯಿಂದ ಯೋಜನೆಗೆ ಅನುಗುಣವಾಗಿ ಸಾಲ ಪಡೆದು ಇಲ್ಲಿ ಇಂದನ್ ಬಾಬು ಉದ್ಯಮ ಸ್ಥಾಪನೆ ಮಾಡಿದ್ದಾರೆ. ಅವರಿಗೆ ಶುಭವಾಗಲಿ ಎಂದರು ಯುವಕರು ಹಾಗು ಉದ್ಯಮಿ ಗಳು ಸರ್ಕಾರದ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ನುಡಿದರು.
ಇದೇ ಸಂದರ್ಭ ಕಾರ್ಯ ಕ್ರಮಕ್ಕೆ ಬಂದ ಸಚಿವರು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಶಾಸಕರುಗಳಾದ ಡಾ. ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಎಂ ರಾಮು, ಉದ್ಯಮಿ ಕೃಷ್ಣಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು