9:18 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು