12:17 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ ಸ್ಪೀಕರ್ ಖಾದರ್ ಚಾಲನೆ

02/12/2023, 10:03

ಬೆಳಗಾವಿ(reporterkarnataka.com): ದಶಮಾನೋತ್ಸವ ಪೂರೈಸಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸುವರ್ಣ ವಿಧಾನಸೌಧಕ್ಕೆ ಹೊಸ ಖದರ್ ತರಲು ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸುವರ್ಣ ಸೌಧ ಕೇವಲ ವರ್ಷದ ಅಧಿವೇಶನಕ್ಕೆ ಸೀಮಿತಗೊಳಿಸದೇ ಅದೊಂದು ಗಡಿ ಪ್ರದೇಶದ ಪ್ರವಾಸಿ ತಾಣವಾಗಿ ಮಾರ್ಪಾಡಾಗಲು ಚಿಂತನೆ ನಡೆಯುತ್ತಿದೆ.


ಈ ಹಿಂದೆ ವರ್ಷದಲ್ಲೊಮ್ಮೆ ಅಧಿವೇಶನ ಸಂದರ್ಭ ಹತ್ತದಿನೈದು ದಿವಸ ಮಾತ್ರ ರಾತ್ರಿಯ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಸ್ಪೀಕರ್ ಖಾದರ್ ಅವರು ಅದರಲ್ಲಿ ಮಹತ್ತರ ಬದಲಾವಣೆಗೆ ಅಂಕಿತ ಹಾಕಿದ್ದಾರೆ. ಅಧಿವೇಶನ ನಡೆಯುವ ದಿನಗಳಲ್ಲದೇ ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಾಷ್ಟ್ರೀಯ ದಿನಾಚರಣೆಗಳಂದು ಬಣ್ಣಬಣ್ಣದ ವಿನ್ಯಾಸದ ಬೆಳಕಿನೊಂದಿಗೆ ಸುವರ್ಣ ಸೌಧ ಕಂಗೊಳಿಸಲು ರೂಪುರೇಷೆಯನ್ನು ತಯಾರಿಸಿದ್ದಾರೆ. ರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುತ್ತಿರುವ ಗುತ್ತಿಗೆದಾರರಿಗೆ 10 ವರ್ಷದ ಸುವರ್ಣಸೌಧದ ಬೆಳಕಿನ ನಿರ್ವಹಣೆ ಕೊಟ್ಟಿರುವ ಸ್ಪೀಕರ್ ಡಿಸೆಂಬರ್ 4 ಅಥವಾ 5 ರಂದು ಅದನ್ನು ಉದ್ಘಾಟಿಸುವರು.
RGBW ಎಲ್ಇಡಿ ಡೈನಾಮಿಕ್ ಲೈಟ್ ನೊಂದಿಗೆ ಮುಂದೆ ಸುವರ್ಣ ಸೌಧ ಕಂಗೊಳಿಸಲಿದೆ. ಬಗೆಬಗೆಯ ವಿನ್ಯಾಸ, ಹಲವು ಬಣ್ಣಗಳಲ್ಲಿ ಕಂಪ್ಯೂಟರೀಕೃತ ಸೌಲಭ್ಯದೊಂದಿಗೆ ಸೌಧದ ಅಂದ ನೂರ್ಮಡಿಗೊಳಿಸಲಿದೆ. ವಿಶೇಷ ಅಂದರೆ ಈ ಹಿಂದೆ ಹತ್ತದಿನೈದು ದಿನ ಉರಿದ ಬೆಳಕಿನ ಅದೇ ಖರ್ಚು ವೆಚ್ಚದಲ್ಲಿ ಈ ಡಿಜಿಟಲೈಸ್ಡ್ ಲೈಟ್ಸ್ ಕೂಡಾ ವರ್ಷಪೂರ್ತಿ ಬೆಳಗಲಿದೆ. ಹೀಗೇ 10 ವರ್ಷದ ಕರಾರನ್ನು ಈ ಯೋಜನೆಗೆ ನೀಡಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರ ವಿನೂತನ ದೂರದೃಷ್ಟಿಯ ಯೋಜನೆಗೆ ಎಲ್ಲರೂ ಶಹಬ್ಬಾಸ್ ಗಿರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು