2:02 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಅಕ್ಷರ ಸಂತ ಹರೇಕಳ ಹಾಜಬ್ಬ

02/12/2023, 22:02

ಕುತ್ಲೂರು(reporterkarnataka.com): ಕುತ್ಲೂರು ಸರಕಾರಿ ಶಾಲೆಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಅಕ್ಷರ ಸಂತ ಹರೇಕಳ ಹಾಜಬ್ಬ ಹೇಳಿದ್ದಾರೆ.
ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು.
ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ನಾನು ಕಿತ್ತಳೆ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿ. ನನ್ನ ಊರಿಗೆ ಸರಕಾರಿ ಶಾಲೆ ಆಗಬೇಕೆಂಬ ಇಚ್ಛೆಯಿಂದ ಜನಪ್ರತಿನಿಧಿಗಳು, ಮಾಧ್ಯಮಗಳು ಸೇರಿದಂತೆ ಶಿಕ್ಷಣದ ಆಸಕ್ತಿ ಹೊಂದಿರುವ ಜನರ ಸಹಕಾರ ದಿಂದ ನನ್ನ ಆಸೆ ಈಡೇರಿದೆ. ಅದೇ ರೀತಿ ಕುತ್ಲೂರಿನಲ್ಲಿಯೂ ಎಲ್ಲ ಜನರ ಸಹಕಾರದಿಂದ ಶಾಲಾ ತೋಟ,ಸಂಸ್ಥೆ ಬೆಳೆದು ಬಂದಿರುವುದು ನೋಡಿದಾಗ ಅತ್ಯಂತ ಹೆಚ್ಚು ಸಂತೋಷವಾಯಿತು ಎಂದು ಹಾಜಬ್ಬ ವಿವರಿಸಿದರು.
ಶಾಲಾ ತೋಟದ ಉದ್ಘಾಟನೆ ಸಮಾರಂಭದಲ್ಲಿ ನಾರಾವಿ ಅಧ್ಯಕ್ಷ ರಾಜ ವರ್ಮ ಜೈನ್ ಅಧ್ಯಕ್ಷ ತೆ ವಹಿಸಿದ್ದರು.ಧರ್ಮ ಸ್ಥಳದ ಧರ್ಮೋಥ್ಥಾನ ಟ್ರಸ್ಟ್ ನ ಕಾರ್ಯದರ್ಶಿ ವೀರು ಶೆಟ್ಟಿ,ದ.ಕ ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಜೈನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಾಯಕ ಯೋಜನಾಧಿಕಾರಿ ಆನಂದ ಸುವರ್ಣ, ಇತರ ಅತಿಥಿ ಗಳಾದ ಜೀವಂಧರ ಕುಮಾರ್, ಸತೀಶ್ ಪಡಿವಾಳ್, ಕೃಷ್ಣ ಪ್ಪ ಪೂಜಾರಿ,ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ಮುಖ್ಯೋಪಾಧ್ಯಾಯರಾದ ರೂಪ ಕುಮಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿ ಕಾರಿ ಪುಷ್ಪ ರಾಜ್ ಬಿ.ಎನ್,ಉಪಾಧ್ಯಕ್ಷ ಭಾಸ್ಕರ ರೈ ಕೆ,ಪತ್ರಕರ್ತ ಧನಕೀರ್ತಿ ಅರಿಗ, ಎಸ್ ಡಿಎಂಸಿ ಉಪಾಧ್ಯಕ್ಷ ರಾದ ಜ್ಯೋತಿ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಉಪಸ್ಥಿತರಿದ್ದರು.

ಎಸ್ ಡಿಎಂ ಸಿ ಅಧ್ಯಕ್ಷ ರಾಮಚಂದ್ರ ಭಟ್ ಸ್ವಾಗತಿಸಿದರು.ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನಿತಾ ವಂದಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೊತ್ಸವ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು