3:33 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು

03/12/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡು ಬಂದಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು