3:19 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು