12:59 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು