2:58 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು