1:39 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಮಕ್ಕಳ ಕಲಾ ಲೋಕದಿಂದ ವಿಶ್ವ ಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ

03/12/2023, 14:47

ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಉದ್ಘಾಟನೆಗೊಂಡಿತು. ಕುಮಾರ ಶಿವಕುಮಾರ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇ ಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವ ಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ ಎಂದರು.


ಇದೇ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ಘಮ ಘಮಿಸುವ ಗುಟ್ಟು ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಶ್ರುತಿಕಾ ಹೇಳಿದರು.
ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ ಉಜಿರೆ ಅವರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, “ಮಕ್ಕಳೆಡೆಗೆ ಸಾಹಿತ್ಯ” ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವ ಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ಘಮ ಘಮಿಸುವ ಗುಟ್ಟು. ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ ಎಂದರು.
ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಸ್ತಾವನೆ ಮಾತು ಹೇಳಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.
ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫರ್ತಿ ಗೀತೆ ಹಾಡಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ನಿರೂಪಿಸಿದರು. ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿದರು. ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು