1:46 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು