4:01 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು