1:38 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ವಿಜಯೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಭಿಮತ

03/12/2023, 22:41

ಸುರತ್ಕಲ್(reporterkarnataka.com):ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.
ಸುರತ್ಕಲ್‍ನಲ್ಲಿ ರಾಜಸ್ಥಾನ, ಮದ್ಯಪ್ರದೇಶ, ಚತ್ತೀಸ್‍ಘಡದಲ್ಲಿ ಜಯಗಳಿಸಿದ್ದು, ಈ ಪ್ರಯುಕ್ತ ಸುರತ್ಕಲ್ ಜಂಕ್ಷನ್ ಹಾಗೂ ಕಾವೂರು ಜಂಕ್ಷನ್ ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ಯಾರಂಟಿಗಳಿಗೆ ಆದ್ಯತೆ ನೀಡದ ಮಹಿಳಾ ಮತದಾರರು ಬಿಜೆಪಿಯನ್ನು ಬೆಂಬಲಿಸಿ ಧಿಕಾರ ಹಿಡಿಯಲು ನೆರವಾಗಿದ್ದಾರೆ.
ತೆಲಂಗಾಣದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳಿಸಿ ,ಮತದಾರರ ಪ್ರೀತಿಗೆ ಪಾತ್ರವಾಗಿದ್ದೇವೆ. 8ಕ್ಕೂ ಅಧಿಕ ನಮ್ಮ ಶಾಸಕರು ವಿಧಾನಸಭೆ ಪ್ರವೇಶಿಲಿದ್ದಾರೆ. ನಾಯಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ನಾಯಕರ ,ವಿವಿಧ ರಾಜ್ಯದ ಕಾರ್ಯಕರ್ತರ ಅವಿರತ ಶ್ರಮದಿಂದ ಬಿಜೆಪಿ ರಾಜ್ಯಭಾರ ಹೆಚ್ಚಾಗುತ್ತಿದೆ.
ಮುಂದೆ ಲೋಕಸಭೆಯಲ್ಲಿಯೂ ಇಂತಹ ಭರ್ಜರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದರು.

ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಶಕ್ತಿ ಕೇಂದ್ರದ ಪ್ರಮುಖರಾದ ವಿಠಲ ಸಾಲಿಯಾನ್ ಮಾತನಾಡಿದರು. ಪ್ರಮುಖರಾದ ಗಣೇಶ್ ಹೊಸಬೆಟ್ಟು, ಅಶೋಕ್ ಶೆಟ್ಟಿ ತಡಂಬಬೈಲ್, ಸುನಿಲ್ ಕುಳಾಯಿ, ಜಯಂತ್ ಸಾಲಿಯಾನ್, ರಾಜೇಶ್ ಮುಕ್ಕ, ರಣ್‍ದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ, ಸಿತೇಶ್ ಕೊಂಡೆ ,ಯುವಮೋರ್ಚಾದ ಭರತ್‍ರಾಜ್ ಕೃಷ್ನಾಪುರ, ತಿಲಕ್, ಜಯಾನಂದ ಚೇಳಾೈರು, ಸುರೇಶ್,ಓಂ ಪ್ರಕಾಶ್ ಶೆಟ್ಟಿಗಾರ್, ಮನಪಾ ಸದಸ್ಯರಾದ ಶ್ವೇತ ಪೂಜಾರಿ, ಸರಿತ ಶಶಿಧರ್, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ,ಲೋಹಿತ್ ಅಮೀನ್, ಶರತ್ ಕುಮಾರ್, ಸುಮಂಗಲರಾವ್,ಗಾಯತ್ರಿ ರಾವ್, ಸಂಗೀತಾ ನಾಯಕ್ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು