2:03 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ವಿಜಯೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಭಿಮತ

03/12/2023, 22:41

ಸುರತ್ಕಲ್(reporterkarnataka.com):ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.
ಸುರತ್ಕಲ್‍ನಲ್ಲಿ ರಾಜಸ್ಥಾನ, ಮದ್ಯಪ್ರದೇಶ, ಚತ್ತೀಸ್‍ಘಡದಲ್ಲಿ ಜಯಗಳಿಸಿದ್ದು, ಈ ಪ್ರಯುಕ್ತ ಸುರತ್ಕಲ್ ಜಂಕ್ಷನ್ ಹಾಗೂ ಕಾವೂರು ಜಂಕ್ಷನ್ ನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ಯಾರಂಟಿಗಳಿಗೆ ಆದ್ಯತೆ ನೀಡದ ಮಹಿಳಾ ಮತದಾರರು ಬಿಜೆಪಿಯನ್ನು ಬೆಂಬಲಿಸಿ ಧಿಕಾರ ಹಿಡಿಯಲು ನೆರವಾಗಿದ್ದಾರೆ.
ತೆಲಂಗಾಣದಲ್ಲಿ ಭಾರೀ ಪ್ರಮಾಣದಲ್ಲಿ ಮತಗಳಿಸಿ ,ಮತದಾರರ ಪ್ರೀತಿಗೆ ಪಾತ್ರವಾಗಿದ್ದೇವೆ. 8ಕ್ಕೂ ಅಧಿಕ ನಮ್ಮ ಶಾಸಕರು ವಿಧಾನಸಭೆ ಪ್ರವೇಶಿಲಿದ್ದಾರೆ. ನಾಯಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ನಾಯಕರ ,ವಿವಿಧ ರಾಜ್ಯದ ಕಾರ್ಯಕರ್ತರ ಅವಿರತ ಶ್ರಮದಿಂದ ಬಿಜೆಪಿ ರಾಜ್ಯಭಾರ ಹೆಚ್ಚಾಗುತ್ತಿದೆ.
ಮುಂದೆ ಲೋಕಸಭೆಯಲ್ಲಿಯೂ ಇಂತಹ ಭರ್ಜರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದರು.

ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಶಕ್ತಿ ಕೇಂದ್ರದ ಪ್ರಮುಖರಾದ ವಿಠಲ ಸಾಲಿಯಾನ್ ಮಾತನಾಡಿದರು. ಪ್ರಮುಖರಾದ ಗಣೇಶ್ ಹೊಸಬೆಟ್ಟು, ಅಶೋಕ್ ಶೆಟ್ಟಿ ತಡಂಬಬೈಲ್, ಸುನಿಲ್ ಕುಳಾಯಿ, ಜಯಂತ್ ಸಾಲಿಯಾನ್, ರಾಜೇಶ್ ಮುಕ್ಕ, ರಣ್‍ದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ, ಸಿತೇಶ್ ಕೊಂಡೆ ,ಯುವಮೋರ್ಚಾದ ಭರತ್‍ರಾಜ್ ಕೃಷ್ನಾಪುರ, ತಿಲಕ್, ಜಯಾನಂದ ಚೇಳಾೈರು, ಸುರೇಶ್,ಓಂ ಪ್ರಕಾಶ್ ಶೆಟ್ಟಿಗಾರ್, ಮನಪಾ ಸದಸ್ಯರಾದ ಶ್ವೇತ ಪೂಜಾರಿ, ಸರಿತ ಶಶಿಧರ್, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ,ಲೋಹಿತ್ ಅಮೀನ್, ಶರತ್ ಕುಮಾರ್, ಸುಮಂಗಲರಾವ್,ಗಾಯತ್ರಿ ರಾವ್, ಸಂಗೀತಾ ನಾಯಕ್ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು