7:07 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ

04/12/2023, 10:47

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ಸೀರೆಯನ್ನು ಹುಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ವಿವಿಧ ರೀತಿಯ ಪೂಜೆಗಳನ್ನು ಸಲ್ಲಿಸುತ್ತಾರೆ.
ಗೌರಿಗೆ ಪ್ರತಿದಿನ ಹಳ್ಳಿಯ ಸೊಗಡಿನ ಜನಪದ ಗೀತೆ, ಕೋಲಾಟ, ಭಜನೆ ಕಾರ್ಯಕ್ರಮವನ್ನು ಪ್ರತಿದಿನ ಹಮ್ಮಿಕೊಂಡು ಗೌರಿ ಹಬ್ಬವನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಗೌರಿ ಹಬ್ಬವನ್ನು 55 ವರ್ಷಗಳಿಂದ ಆಚರಿಸುತಿದ್ದೇವೆ, ನಮಗೆ ಸಮೃದ್ಧಿ ಮಳೆ ಆಗಲಿ ಮಳೆ ಆಗದೆ ಇರಲಿ ಯಾವ ವರ್ಷವೂ ಹಬ್ಬವನ್ನು ಕೈ ಬಿಡದೆ ಹಿಂದಿನಿಂದಲೂ ಆಚರಿಸಿಕೊಳ್ಳುತ್ತಾ ಬಂದಿದ್ದೇವೆ.
ಗೌರಿಯನ್ನು ವಿಸರ್ಜನೆ ಮಾಡುವ ಕೊನೆಯ ದಿನ, ಕೀಲು ಕುದುರೆ, ನಂದಿಕೋಲು, ಡೋಲು ಕುಣಿತ, ವೀರಗಾಸೆ, ನೃತ್ಯ ಪ್ರದರ್ಶನ ಹೀಗೆ ವಿವಿಧ ರೀತಿಯ ಕಲಾತಂಡಗಳನ್ನು ಪ್ರತಿ ವರ್ಷವೂ ಕರೆತಂದು ಗೌರಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ವರ್ಷದಿಂದ ವರ್ಷ ಯಶಸ್ವಿಗೊಳಿಸಿಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು