10:35 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ

04/12/2023, 10:47

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ಸೀರೆಯನ್ನು ಹುಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ವಿವಿಧ ರೀತಿಯ ಪೂಜೆಗಳನ್ನು ಸಲ್ಲಿಸುತ್ತಾರೆ.
ಗೌರಿಗೆ ಪ್ರತಿದಿನ ಹಳ್ಳಿಯ ಸೊಗಡಿನ ಜನಪದ ಗೀತೆ, ಕೋಲಾಟ, ಭಜನೆ ಕಾರ್ಯಕ್ರಮವನ್ನು ಪ್ರತಿದಿನ ಹಮ್ಮಿಕೊಂಡು ಗೌರಿ ಹಬ್ಬವನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಗೌರಿ ಹಬ್ಬವನ್ನು 55 ವರ್ಷಗಳಿಂದ ಆಚರಿಸುತಿದ್ದೇವೆ, ನಮಗೆ ಸಮೃದ್ಧಿ ಮಳೆ ಆಗಲಿ ಮಳೆ ಆಗದೆ ಇರಲಿ ಯಾವ ವರ್ಷವೂ ಹಬ್ಬವನ್ನು ಕೈ ಬಿಡದೆ ಹಿಂದಿನಿಂದಲೂ ಆಚರಿಸಿಕೊಳ್ಳುತ್ತಾ ಬಂದಿದ್ದೇವೆ.
ಗೌರಿಯನ್ನು ವಿಸರ್ಜನೆ ಮಾಡುವ ಕೊನೆಯ ದಿನ, ಕೀಲು ಕುದುರೆ, ನಂದಿಕೋಲು, ಡೋಲು ಕುಣಿತ, ವೀರಗಾಸೆ, ನೃತ್ಯ ಪ್ರದರ್ಶನ ಹೀಗೆ ವಿವಿಧ ರೀತಿಯ ಕಲಾತಂಡಗಳನ್ನು ಪ್ರತಿ ವರ್ಷವೂ ಕರೆತಂದು ಗೌರಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ವರ್ಷದಿಂದ ವರ್ಷ ಯಶಸ್ವಿಗೊಳಿಸಿಕೊಂಡು ಬಂದಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು