2:06 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಖಾನಾಪೂರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆಮೆಗತಿ: ಗ್ರಾಮಸ್ಥರ ಸ್ಥಿತಿ ಅಧೋಗತಿ

04/12/2023, 10:50

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಜಲ ಜೀವನ್ ಮಿಷನ್ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮೊತ್ತದ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿವ ನೀರಿನ ಪೈಪ್ ಕಾಮಗಾರಿ ನಡೆದಿದೆ. ಮಂದಗತಿಯಲ್ಲಿ ಕಾಮಗಾರಿ ನಡೆದಿದ್ದರಿಂದ ಪೈಪ್ ಲೈನ್ ಗೆ ತೆಗೆದ ತೆಗ್ಗು ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ.
ಗುತ್ತೇದಾರ ನಿರ್ಲಕ್ಷ್ಯ.ದಿಂದ ರಾತ್ರಿ ವೇಳೆ ವಾರ್ಡಗಳ ಸಂಚಾರ ಮಾಡಲು ಮಕ್ಕಳಿಗೆ ಹಾಗೂ ವೃದ್ಧರಿಗೆ ತೊಂದರೆಯಾಗಿದೆ.
ಅಹಿತಕರ ಘಟನೆ ನಡೆಯುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಬಿರುಕು ಬಿಟ್ಟ ತೆಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಹಾಗೂ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ಅಂದಾಜು ಪತ್ರದಂತೆ ನಡೆಯುತ್ತಿಲ್ಲ. ತೋಡಿದ ಗುಂಡಿಗಳು ಮುಚ್ಚದೆ ಹಾಗೆ ಇರುವುದರಿಂದ ವಾಹನ ಸವಾರರು, ಜನರು ತಿರುಗಾಡಲು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ನಾಗಪ್ಪ ಖಾನಾಪೂರ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು