1:55 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು

04/12/2023, 20:26

ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ.
ಹಾಸನದ ಸಕಲೇಶಪುರ ಸಮೀಪದ ಯಸಳೂರು ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ರೇಡಿಯೋ ಕಾಲರ್ ಅಳವಡಿಸು ಪ್ರಕ್ರಿಯೆ ನಡೆಯ ಬೇಕಿತ್ತು. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ನಡೆಸಿತ್ತು. ಕಾಡಾನೆ ದಾಳಿಗೆ ಹೆದರಿ ಉಳಿದ ಎರಡು ಸಾಕಾನೆಗಳು ಪಲಾಯನ ಮಾಡಿತ್ತು. ಆದರೆ 65ರ ಹರೆಯದ ಅರ್ಜುನ ನೇರ ಕದನಕ್ಕೆ ಇಳಿದಿದ್ದ. ಮಾವುತನಿಗೂ ಅರ್ಜುನನ ನಿಯಂತ್ರಣ ಮಾಡಲು ಸಾಧ್ಯವಾಗದೆ ಆತ ಆನೆ ಮೇಲಿನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದ. ಭೀಕರ ಕಾಳಗದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಪಕ್ಕೆಯ ಭಾಗಕ್ಕೆ ತಿವಿದಿತ್ತು. ಇದರಿಂದ ಗಂಭೀರ ಗಾಯಗೊಂಡ ಅರ್ಜುನ ನೆಲಕ್ಕೆ ಕುಸಿದು ಕೊನೆಯುಸಿರೆಳೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು