8:29 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು

04/12/2023, 20:26

ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ.
ಹಾಸನದ ಸಕಲೇಶಪುರ ಸಮೀಪದ ಯಸಳೂರು ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ರೇಡಿಯೋ ಕಾಲರ್ ಅಳವಡಿಸು ಪ್ರಕ್ರಿಯೆ ನಡೆಯ ಬೇಕಿತ್ತು. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ನಡೆಸಿತ್ತು. ಕಾಡಾನೆ ದಾಳಿಗೆ ಹೆದರಿ ಉಳಿದ ಎರಡು ಸಾಕಾನೆಗಳು ಪಲಾಯನ ಮಾಡಿತ್ತು. ಆದರೆ 65ರ ಹರೆಯದ ಅರ್ಜುನ ನೇರ ಕದನಕ್ಕೆ ಇಳಿದಿದ್ದ. ಮಾವುತನಿಗೂ ಅರ್ಜುನನ ನಿಯಂತ್ರಣ ಮಾಡಲು ಸಾಧ್ಯವಾಗದೆ ಆತ ಆನೆ ಮೇಲಿನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದ. ಭೀಕರ ಕಾಳಗದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಪಕ್ಕೆಯ ಭಾಗಕ್ಕೆ ತಿವಿದಿತ್ತು. ಇದರಿಂದ ಗಂಭೀರ ಗಾಯಗೊಂಡ ಅರ್ಜುನ ನೆಲಕ್ಕೆ ಕುಸಿದು ಕೊನೆಯುಸಿರೆಳೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು