10:11 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು

04/12/2023, 20:26

ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ.
ಹಾಸನದ ಸಕಲೇಶಪುರ ಸಮೀಪದ ಯಸಳೂರು ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ರೇಡಿಯೋ ಕಾಲರ್ ಅಳವಡಿಸು ಪ್ರಕ್ರಿಯೆ ನಡೆಯ ಬೇಕಿತ್ತು. ಈ ವೇಳೆ ಕಾಡಾನೆ ಅರ್ಜುನನ ಮೇಲೆ ದಾಳಿ ನಡೆಸಿತ್ತು. ಕಾಡಾನೆ ದಾಳಿಗೆ ಹೆದರಿ ಉಳಿದ ಎರಡು ಸಾಕಾನೆಗಳು ಪಲಾಯನ ಮಾಡಿತ್ತು. ಆದರೆ 65ರ ಹರೆಯದ ಅರ್ಜುನ ನೇರ ಕದನಕ್ಕೆ ಇಳಿದಿದ್ದ. ಮಾವುತನಿಗೂ ಅರ್ಜುನನ ನಿಯಂತ್ರಣ ಮಾಡಲು ಸಾಧ್ಯವಾಗದೆ ಆತ ಆನೆ ಮೇಲಿನಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದ. ಭೀಕರ ಕಾಳಗದಲ್ಲಿ ಕಾಡಾನೆಯು ಅರ್ಜುನನ ಹೊಟ್ಟೆ ಪಕ್ಕೆಯ ಭಾಗಕ್ಕೆ ತಿವಿದಿತ್ತು. ಇದರಿಂದ ಗಂಭೀರ ಗಾಯಗೊಂಡ ಅರ್ಜುನ ನೆಲಕ್ಕೆ ಕುಸಿದು ಕೊನೆಯುಸಿರೆಳೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು