9:44 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ

04/12/2023, 20:40

ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ ಹೇಳಿದರು.


ಅವರು ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ಉಪ್ಪಿನಂಗಡಿ ಮಂಡಲದ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಇಶಾ ಶರ್ಮ ಕಾಂತಾಜೆ, ರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಪಟು ದೀಪ್ತಿ ಲಕ್ಷ್ಮಿ ಚಿಕ್ಕಮುಂಡೇಲು ಉದ್ಘಾಟಿಸಿದರು. ಉಪ್ಪಿನಂಗಡಿ ಹವ್ಯಕ ಮಂಡಲದ ಅಧಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಶುಭ ಹಾರೈಸಿ ಮಾತನಾಡಿದರು.
ಅತಿಥಿಗಳಾಗಿ ಶ್ರೀರಾಮ ಚಂದ್ರಾಪುರ ಮಠದ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಶುಭ ಕೋರಿದರು. ವಿಷ್ಣುಗುಪ್ತ ವಿದ್ಯಾಪೀಠ ಅಶೋಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲದ ಪ್ರಮುಖರಾದ ಬಾಲಸುಬ್ರಮಣ್ಯ ಭಟ್ ಸರ್ಪಮೂಲೆ, ಹೇರಂಭ ಶಾಸ್ರ್ತೀ,ಮಹೇಶ ಚೂಂತಾರು, ದೇವಿಕಾ ಶಾಸ್ತ್ರೀ ಅರವಿಂದ ದರ್ಭೆ, ಪರಮೇಶ್ವರ ಭಟ್ ವೇಣೂರು , ಶೈಲಜಾ ಭಟ್ ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜು ಪುತ್ತೂರಿನ ರೋವರ್‍ಸ್ ರೇಂಜರ್‍ಸ್ ತಂಡವನ್ನು ಅಭಿನಂದಿಸಲಾಯಿತು. ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಆರಂಭದಲ್ಲಿ ಪಥಸಂಚನದ ಬಳಿಕ ದಿನವಿಡಿ ಬೌದ್ಧಿಕ ಸ್ಪರ್ಧೆಗಳು ಮತ್ತು ಹೊರಾಂಗಣ ಒಳಾಂಗಣ ಆಟಗಳು ಜರಗಿತು. ಸಮಾರೋಪ ಸಮಾರಂಭದಲ್ಲಿ ಹವ್ಯಕ ಮಂಡಲಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು