1:45 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !!

04/08/2021, 16:29

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. 

ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ  

ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಹೊರಳಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿಯ ಸಿದ್ದಪ್ಪ ವೃತ್ತ ಬಳಿ ಒಲೈಕಾರ್ ಬೆಂಬಲಿಗರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಮಲಗಿ ಹೊರಳಾಡಿದರು. ಈ ಸಂದರ್ಭದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸುರಪುರ ಶಾಸಕ ರಾಜು ಗೌಡ ಅವರ ಬೆಂಬಲಿಗರು ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ರಾಜು ಗೌಡ ಸಚಿವರಾಗುತ್ತಾರೆಂದು ಅವರ ಬೆಂಬಲಿಗರು ಬೆಂಗಳೂರಿಗೆ ಆಗಮಿಸಿದ್ದರು. ಸಚಿವರ ಪಟ್ಟಿ ಹೊರಬೀಳುತ್ತಿದ್ದಂತೆ ತಮ್ಮ ನಾಯಕನಿಗೆ ಸ್ಥಾನ ಸಿಗಲಿಲ್ಲ ಎಂಬ ಆಕ್ರೋಶದಿಂದ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬೆಂಬಲಿಗರು ಕೂಡ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತನ್ನ ಹೆಸರು ಸಚಿವರ ಪಟ್ಟಿಯಲ್ಲಿರುವುದನ್ನು ಖಾತ್ರಿಪಡಿಸುತ್ತಿದ್ದಂತೆ ಕುಟುಂಬ ಸಮೇತರಾಗಿ ಬೆಂಗಳೂರಿನ ಕುಮಾರ ಪಾರ್ಕ್ ಬಳಿ ಇರುವ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈಶ್ವರಪ್ಪ ಅವರ ಜತೆ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು