9:23 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !!

04/08/2021, 16:29

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. 

ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ  

ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಹೊರಳಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿಯ ಸಿದ್ದಪ್ಪ ವೃತ್ತ ಬಳಿ ಒಲೈಕಾರ್ ಬೆಂಬಲಿಗರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಮಲಗಿ ಹೊರಳಾಡಿದರು. ಈ ಸಂದರ್ಭದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸುರಪುರ ಶಾಸಕ ರಾಜು ಗೌಡ ಅವರ ಬೆಂಬಲಿಗರು ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ರಾಜು ಗೌಡ ಸಚಿವರಾಗುತ್ತಾರೆಂದು ಅವರ ಬೆಂಬಲಿಗರು ಬೆಂಗಳೂರಿಗೆ ಆಗಮಿಸಿದ್ದರು. ಸಚಿವರ ಪಟ್ಟಿ ಹೊರಬೀಳುತ್ತಿದ್ದಂತೆ ತಮ್ಮ ನಾಯಕನಿಗೆ ಸ್ಥಾನ ಸಿಗಲಿಲ್ಲ ಎಂಬ ಆಕ್ರೋಶದಿಂದ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬೆಂಬಲಿಗರು ಕೂಡ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತನ್ನ ಹೆಸರು ಸಚಿವರ ಪಟ್ಟಿಯಲ್ಲಿರುವುದನ್ನು ಖಾತ್ರಿಪಡಿಸುತ್ತಿದ್ದಂತೆ ಕುಟುಂಬ ಸಮೇತರಾಗಿ ಬೆಂಗಳೂರಿನ ಕುಮಾರ ಪಾರ್ಕ್ ಬಳಿ ಇರುವ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈಶ್ವರಪ್ಪ ಅವರ ಜತೆ ಪತ್ನಿ ಜಯಲಕ್ಷ್ಮೀ, ಪುತ್ರ ಕಾಂತೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು