6:01 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು

05/12/2023, 19:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕಮಲಾಕ್ಷಿ ಹಾಗೂ ಉಪಾಧ್ಯಕ್ಷೆ ಪುಷ್ಪ ತಿಳಿಸಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಅಕ್ರಮ ಹಾಲಿನ ಪುಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಲ್ಲಿ ಗ್ರಾಮದ ನಾಗಮ್ಮ, ಶಿವಮ್ಮ, ಹಾಗೂ ಸುಮಾ ಎಂಬ ಅಂಗನವಾಡಿ ಕಾರ್ಯಕರ್ತೆಯರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ಅಮಾನತು ಮಾಡಲಾಗಿತ್ತು.
ಇವರ ಮೇಲೆ ಬಂದ ಆರೋಪ ನಿಜವೋ ಸುಳ್ಳು ಎಂದು ತಿಳಿಯಲು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಇದು ಸುಳ್ಳು ಆರೋಪ ಎಂದು ಗೊತ್ತಾದ ಮೇಲೆ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನೊಂದ ಸಂತ್ರಸ್ತ ಮಹಿಳೆಯರ ಬೆಂಬಲಕ್ಕೆ ನಿಂತು ನಮ್ಮ ಸಂಘಟನೆಯು ಅವರಿಗೆ ಮತ್ತೆ ಕೆಲಸಕ್ಕೆ ಮರು ನೇಮಕ ಮಾಡಲಾಯಿತು.

ಇವರ ನೇಮಕವನ್ನು ಸಹಿಸದ ಕೆಲವರು ಅಧಿಕಾರಿಗಳಿಗೆ ಹಣ ನೀಡಿ ನೇಮಕ ಮಾಡಿಕೊಂಡಿದ್ದಾರೆ ಎಂದು ನಮ್ಮ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಷಯ ವಾಗಿದೆ ಎಂದರು.
ಜೀವನ ನಡೆಸುವುದೇ ಕಷ್ಟದ ಪರಿಸ್ಥಿತಿಯಲ್ಲಿರುವ ಸಂತ್ರಸ್ತರು ಹಣ ಎಲ್ಲಿಂದ ನೀಡುತ್ತಾರೆ ಎಂದು ಪ್ರಶ್ನಿಸಿದರು.
ನಮ್ಮ ಸಂಘಟನೆಯ ಹೋರಾಟದ ಫಲವೇ ಇಂದು ಸಂತ್ರಸ್ತರನ್ನು ಮತ್ತೆ ಕೆಲಸಕ್ಕೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಕಾರ್ಯದರ್ಶಿ ಹೇಮಾ, ಉಪಾಧ್ಯಕ್ಷೆ ಪುಷ್ಪ, ಖಜಾಂಚಿ ಮಹಾಲಕ್ಷ್ಮಿ, ಸಂತ್ರಸ್ಯರಾದ ನಾಗಮ್ಮ, ಶಿವಮ್ಮ, ಸುಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು