9:43 PM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ

05/12/2023, 19:52

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು.
ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಅಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷದ್ರುವ ಫೌಂಡೇಶನ್ ನ ಸ್ಥಾಪಕಧ್ಯಾಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿದಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ನವನೀತ್ ಕದ್ರಿ, ಕೆ.ಕೆ. ಪೇಜಾವರ್, ಪ್ರದೀಪ್ ಕುಮಾರ್ ಆಳ್ವ,, ಲೀಲಾಕ್ಷ ಕರ್ಕೇರ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು