6:02 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಪದವಿನಂಗಡಿ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ ಪ್ರತಿಷ್ಠಾವರ್ಧಂತಿ; ಕೋಲ ಸೇವೆ ಸಂಪನ್ನ

05/12/2023, 19:52

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ನಡೆಯಿತು.
ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಅಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯಕ್ಷದ್ರುವ ಫೌಂಡೇಶನ್ ನ ಸ್ಥಾಪಕಧ್ಯಾಕ್ಷ ಪಟ್ಲ ಸತೀಶ್ ಕುಮಾರ್ ಶೆಟ್ಟಿ, ಮಂಕಿಸ್ಟ್ಯಾಂಡ್ ಕಟೀಲ್ದಪ್ಪೆ ಸನ್ನಿದಿಯ ಅರ್ಚಕರಾದ ಪ್ರಾಣೇಶ್, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ವಸಂತ್ ಪೂಜಾರಿ, ಪ್ರಮುಖರಾದ ನವನೀತ್ ಕದ್ರಿ, ಕೆ.ಕೆ. ಪೇಜಾವರ್, ಪ್ರದೀಪ್ ಕುಮಾರ್ ಆಳ್ವ,, ಲೀಲಾಕ್ಷ ಕರ್ಕೇರ, ಉದ್ಯಮಿಗಳಾದ ಎಂ. ಅಶೋಕ್ ಶೇಟ್, ನವೀನ್ ಕುಮಾರ್, ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು