6:57 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ ಬಹಿಷ್ಕರಿಸಲು ಕರೆ

06/12/2023, 12:34

ಮಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟಿಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಡಿ. 6ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದಕ ಜಿಲ್ಲಾ ಅಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಸರ್ಕಾರದ ಸಿಬ್ಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಕ್ರಮಾತಿಗೊಳಿಸುವುದು, ಸಹಜ ನೌಕರನಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡುವುದು. ಹಾಗೂ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಭಟನೆಯನ್ನು ನಡೆಸಲಾಗುವುದು.
ಈ ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ. ಸರಕಾರ ಡಿ.7ರ ಒಳಗೆ ಸೂಕ್ತ ಸ್ಪಂದನೆಯನ್ನು ನೀಡದೇ ಇದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು