1:24 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು