5:59 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು