10:24 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕ್ರೆಡೈಯಿಂದ ಮಂಗಳೂರಿನಲ್ಲಿ ಮಾ.9 ಮತ್ತು 10ರಂದು ಎರಡು ದಿನಗಳ ಬೃಹತ್ ‘ರಿಯಾಲ್ಟಿ ಎಕ್ಸ್ ಪೋ’: ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ

07/12/2023, 23:11

ಮಂಗಳೂರು(reporterkarnataka.com): ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಅಧಿಕ ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯಗಳು ದೊರೆಯುವಂತೆ ಎಕ್ಸ್‌ಪೋದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಲಕ್ಸುರಿ ಅಪಾರ್ಟ್‌ಮೆಂಟ್‌ಗಳು, ಎಲೆಕ್ಟ್ಪಾನಿಕ್ಸ್ ಉತ್ಪನ್ನಗಳು, ವಸತಿ, ಬ್ಯಾಂಕ್, ಕಾರ್ ಡೀಲರ್‍ಸ್ ಸೇರಿದಂತೆ ವಿವಿಧ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಲಿವೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಕ್ರೆಡೈ ಸಂಸ್ಥೆಯ ಅಧ್ಯಕ್ಷ ವಿನೋದ್ ಪಿಂಟೋ ಅವರು ಮಾತಾನಾಡಿ
ಇತ್ತೀಚೆಗೆ, ಬಿಲ್ಡರ್ ಸಂಸ್ಥೆಯೊಂದರ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಂಬಂಧಿಸಿದ ಪ್ರಕರಣದಲ್ಲಿ ಗ್ರಾಹಕರ ವೇದಿಕೆಯು ನೀಡಿದ ತೀರ್ಪಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದರು.
ಮಂಗಳೂರಿನ ಕಟ್ಟಡ ನಿಯಮಾವಳಿ ಪ್ರಕಾರ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದರೂ, ತನಗೆ ನಿಗದಿತ ಕಾರ್ ಪಾರ್ಕಿಂಗ್ ಸ್ಲಾಟ್ ನಿಗದಿಪಡಿಸಿಲ್ಲ ಎಂದು ದೂರುದಾರರು ಆರಂಭಿಕ ದೂರು ನೀಡಿ ಪ್ರಸಕ್ತ ನೀಡಿರುವ ಆವರಣದೊಳಗೆ ಮುಚ್ಚಿದ ಪಾರ್ಕಿಂಗ್ (ತಗಡು ಮಾಡು) ಮಾದರಿಯ ಪಾರ್ಕಿಂಗ್ ಬೇಡ, ತನಗೆ ಕಾಂಕ್ರೀಟ್ ಕಟ್ಟಡದ ಕೆಳಗೆಯೆ ಪಾರ್ಕಿಂಗ್ ಸ್ಲಾಟ್ ಬೇಕು ಎಂದು ಹೇಳಿದ್ದರು. ಆದರೆ ಸದ್ರಿ ಕಟ್ಟಡವು ಈಗಾಗಲೇ ಮಾರಾಟ ವಾಗಿದ್ದು, ಪ್ರಸಕ್ತ ಸನ್ನಿವೇಶದಲ್ಲಿ ಬದಲಾವಣೆ ಆಸಾಧ್ಯವಾಗಿತ್ತು. ಈ ಸಮಸ್ಯೆಯ ಬಗ್ಗೆ ದೂರುದಾರ ವ್ಯಕ್ತಿಯ ಬಳಿ ಸಾಕಷ್ಟು ಬಾರಿ ಸಂಧಾನ ನಡೆಸಿದರು ಪರಿಹಾರ ಸಾಧ್ಯವಾಗಿರಲಿಲ್ಲ. ಈ ನಡುವೆ ಜಿಲ್ಲಾ ಗ್ರಾಹಕ ವೇದಿಕೆ ದೂರುದಾರರ ಪರವಾಗಿ ತೀರ್ಪು ನೀಡಿದೆ. ಮುಂದೆ ರಾಜ್ಯ ವೇದಿಕೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ರೆಡೈ ಕಾರ್ಯದರ್ಶಿ ಗುರು ಎಂ. ರಾವ್, ಉಪಾಧ್ಯಕ್ಷ ಪ್ರಶಾಂತ್ ಸನಿಲ್, ಜತೆ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಂಡಾರಿ, ಕೋಶಾಧಿಕಾರಿ ಕರುಣಾಕರಣ್, ಪ್ರಮುಖರಾದ ರೋಹನ್ ಮೊಂತೇರೊ, ನವೀನ್ ಕಾರ್ಡೋಜ, ಧೀರಜ್ ಅಮೀನ್, ಆವೊಲಾನ್ ಪತ್ರಾವೊ, ವಿಲಿಯಂ ಡಿಸೋಜ, ರವೀಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು