12:34 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕ್ರೆಡೈಯಿಂದ ಮಂಗಳೂರಿನಲ್ಲಿ ಮಾ.9 ಮತ್ತು 10ರಂದು ಎರಡು ದಿನಗಳ ಬೃಹತ್ ‘ರಿಯಾಲ್ಟಿ ಎಕ್ಸ್ ಪೋ’: ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ

07/12/2023, 23:11

ಮಂಗಳೂರು(reporterkarnataka.com): ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಅಧಿಕ ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯಗಳು ದೊರೆಯುವಂತೆ ಎಕ್ಸ್‌ಪೋದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಲಕ್ಸುರಿ ಅಪಾರ್ಟ್‌ಮೆಂಟ್‌ಗಳು, ಎಲೆಕ್ಟ್ಪಾನಿಕ್ಸ್ ಉತ್ಪನ್ನಗಳು, ವಸತಿ, ಬ್ಯಾಂಕ್, ಕಾರ್ ಡೀಲರ್‍ಸ್ ಸೇರಿದಂತೆ ವಿವಿಧ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಲಿವೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಕ್ರೆಡೈ ಸಂಸ್ಥೆಯ ಅಧ್ಯಕ್ಷ ವಿನೋದ್ ಪಿಂಟೋ ಅವರು ಮಾತಾನಾಡಿ
ಇತ್ತೀಚೆಗೆ, ಬಿಲ್ಡರ್ ಸಂಸ್ಥೆಯೊಂದರ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಂಬಂಧಿಸಿದ ಪ್ರಕರಣದಲ್ಲಿ ಗ್ರಾಹಕರ ವೇದಿಕೆಯು ನೀಡಿದ ತೀರ್ಪಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದರು.
ಮಂಗಳೂರಿನ ಕಟ್ಟಡ ನಿಯಮಾವಳಿ ಪ್ರಕಾರ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದರೂ, ತನಗೆ ನಿಗದಿತ ಕಾರ್ ಪಾರ್ಕಿಂಗ್ ಸ್ಲಾಟ್ ನಿಗದಿಪಡಿಸಿಲ್ಲ ಎಂದು ದೂರುದಾರರು ಆರಂಭಿಕ ದೂರು ನೀಡಿ ಪ್ರಸಕ್ತ ನೀಡಿರುವ ಆವರಣದೊಳಗೆ ಮುಚ್ಚಿದ ಪಾರ್ಕಿಂಗ್ (ತಗಡು ಮಾಡು) ಮಾದರಿಯ ಪಾರ್ಕಿಂಗ್ ಬೇಡ, ತನಗೆ ಕಾಂಕ್ರೀಟ್ ಕಟ್ಟಡದ ಕೆಳಗೆಯೆ ಪಾರ್ಕಿಂಗ್ ಸ್ಲಾಟ್ ಬೇಕು ಎಂದು ಹೇಳಿದ್ದರು. ಆದರೆ ಸದ್ರಿ ಕಟ್ಟಡವು ಈಗಾಗಲೇ ಮಾರಾಟ ವಾಗಿದ್ದು, ಪ್ರಸಕ್ತ ಸನ್ನಿವೇಶದಲ್ಲಿ ಬದಲಾವಣೆ ಆಸಾಧ್ಯವಾಗಿತ್ತು. ಈ ಸಮಸ್ಯೆಯ ಬಗ್ಗೆ ದೂರುದಾರ ವ್ಯಕ್ತಿಯ ಬಳಿ ಸಾಕಷ್ಟು ಬಾರಿ ಸಂಧಾನ ನಡೆಸಿದರು ಪರಿಹಾರ ಸಾಧ್ಯವಾಗಿರಲಿಲ್ಲ. ಈ ನಡುವೆ ಜಿಲ್ಲಾ ಗ್ರಾಹಕ ವೇದಿಕೆ ದೂರುದಾರರ ಪರವಾಗಿ ತೀರ್ಪು ನೀಡಿದೆ. ಮುಂದೆ ರಾಜ್ಯ ವೇದಿಕೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ರೆಡೈ ಕಾರ್ಯದರ್ಶಿ ಗುರು ಎಂ. ರಾವ್, ಉಪಾಧ್ಯಕ್ಷ ಪ್ರಶಾಂತ್ ಸನಿಲ್, ಜತೆ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಂಡಾರಿ, ಕೋಶಾಧಿಕಾರಿ ಕರುಣಾಕರಣ್, ಪ್ರಮುಖರಾದ ರೋಹನ್ ಮೊಂತೇರೊ, ನವೀನ್ ಕಾರ್ಡೋಜ, ಧೀರಜ್ ಅಮೀನ್, ಆವೊಲಾನ್ ಪತ್ರಾವೊ, ವಿಲಿಯಂ ಡಿಸೋಜ, ರವೀಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು