8:35 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು