11:50 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು