5:59 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು