7:11 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು