9:46 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮೊಟ್ಟೆ ಹಗರಣ ಆರೋಪಕ್ಕೆ ಸಿಲುಕಿರುವ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ವ್ಯವಸ್ಥೆ!: ಓಡೋಡಿ ಬಂದು ಪ್ರಮಾಣ ವಚನ ಸ್ವೀಕಾರ !!

04/08/2021, 23:03

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ಪೂರೈಕೆ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಿಲುಕಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಕೊನೆಯ ಕ್ಷಣದಲ್ಲಿ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಜೊಲ್ಲೆ ಅವರನ್ನು ಜೀರೋ ಟ್ರಾಫಿಕ್ ನಲ್ಲಿ ರಾಜಭವನಕ್ಕೆ ಕರೆದು ತಂದು ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಡಲಾಯಿತು.

ಮೊಟ್ಟೆ ಹಗರಣದಲ್ಲಿ ಸಿಲುಕಿಕೊಂಡಿರುವ ಜೊಲ್ಲೆ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಎಲ್ಲ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಜೊಲ್ಲೆ ಅವರು ಪಕ್ಷದ ವರಿಷ್ಠರ ಮನವೊಲಿಸಲು ತನ್ನ ಪತಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಹಿಂತಿರುಗುವಾಗ ಕೊಂಚ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭವನ್ನು ಕೂಡ ಕೊಂಚ ವಿಳಂಬ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಿತ್ತು.

ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ  ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರೊಂದಿಗೆ ಆಗಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಝಿರೋ ಟ್ರಾಫಿಕ್‍ನಲ್ಲಿ ರಾಜಭವನಕ್ಕೆ ಕರೆದು ತರಲಾಯಿತು. ಜೊಲ್ಲೆ ಅವರು ಕೊನೆಗೂ ಓಡೋಡಿ ಬಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು