3:53 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್: ಡಿ. 10ರಂದು ಹೊರಕಾಣಿಕೆ ಮೆರವಣಿಗೆ; 11ರಂದು ಅನ್ನ ಸಂತರ್ಪಣೆ

08/12/2023, 21:58

ಮಂಗಳೂರು(reporterkarnataka.com): ನಗರದ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್‌ 11ರಂದು ಅನ್ನ ಸಂತರ್ಪಣೆ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಡಿ. 10 ರಂದು ನಡೆಯಲಿದೆ.
ಹೊರೆ ಕಾಣಿಕೆ ಮೆರವಣಿಗೆಯು ಅಂದು ಅಪರಾಹ್ನ 3.30 ಕ್ಕೆ ಬಿಕರ್ನಕಟ್ಟೆಯ ಬಾಲ ಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಡಲಿದೆ. 4 ವಾರ್ಡ್ ಒಳಗೊಂಡ 11 ವಲಯಗಳು ಹೊರಕಾಣಿಕೆಯನ್ನು ತರಲಿವೆ. ಈ ಮೆರವಣಿಗೆಯಲ್ಲಿ ಭಾಗವಹಿಸಿ ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ ಆಶೀರ್ವಾದಗಳನ್ನು ಪಡೆಯ ಬೇಕೆಂದು ವಿನಂತಿಸಲಾಗಿದೆ.

ಡಿ. 11ರಂದು ಕುಲ್ಯರ್ದ ಅಜ್ಜೆರ್ ಅವರ 146ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ರೈ.ರೆ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು