7:41 PM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್: ಡಿ. 10ರಂದು ಹೊರಕಾಣಿಕೆ ಮೆರವಣಿಗೆ; 11ರಂದು ಅನ್ನ ಸಂತರ್ಪಣೆ

08/12/2023, 21:58

ಮಂಗಳೂರು(reporterkarnataka.com): ನಗರದ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್‌ 11ರಂದು ಅನ್ನ ಸಂತರ್ಪಣೆ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಡಿ. 10 ರಂದು ನಡೆಯಲಿದೆ.
ಹೊರೆ ಕಾಣಿಕೆ ಮೆರವಣಿಗೆಯು ಅಂದು ಅಪರಾಹ್ನ 3.30 ಕ್ಕೆ ಬಿಕರ್ನಕಟ್ಟೆಯ ಬಾಲ ಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಡಲಿದೆ. 4 ವಾರ್ಡ್ ಒಳಗೊಂಡ 11 ವಲಯಗಳು ಹೊರಕಾಣಿಕೆಯನ್ನು ತರಲಿವೆ. ಈ ಮೆರವಣಿಗೆಯಲ್ಲಿ ಭಾಗವಹಿಸಿ ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ ಆಶೀರ್ವಾದಗಳನ್ನು ಪಡೆಯ ಬೇಕೆಂದು ವಿನಂತಿಸಲಾಗಿದೆ.

ಡಿ. 11ರಂದು ಕುಲ್ಯರ್ದ ಅಜ್ಜೆರ್ ಅವರ 146ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ರೈ.ರೆ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು