10:46 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯ‌ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

09/12/2023, 12:16

ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಬಾಲವಿಕಾಸ ಶಾಲೆಯು ಇದೀಗ ಎಲ್ಲಾ ಸೌಕರ್ಯಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ವಿಸ್ತಾರವಾದ ಆಟದ ಮೈದಾನವನ್ನು ಹೊಂದಿದ್ದು ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ‌, ಶಾಲಾ ವಿದ್ಯಾರ್ಥಿಗಳು ಈ ಸೌಕರ್ಯಗಳನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರು”ಇಂದಿನ ಮಕ್ಕಳಿಗೆ ವ್ಯಾಯಾಮದ ಅಗತ್ಯವಿದೆ, ಅದು ಕ್ರೀಡೆಯಲ್ಲಿ ದೊರೆಯುತ್ತದೆ.ಶಿಕ್ಷಣ ಎಂದರೆ ಕೇವಲ‌ ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಪ್ರತಿಭೆಯ ಅನ್ವೇಷಣೆಯೂ ಶಿಕ್ಷಣವಾಗಿದೆ”ಎಂದರು. ಕ್ರೀಡೋತ್ಸವದಲ್ಲಿ ಕ್ರೀಡಾ ಜ್ಯೋತಿಯ ಆಗಮನ ಹಾಗೂ ಆಕರ್ಷಣೀಯ ಪಥಸಂಚಲನವು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕಿ ಮೋಹಿನಿ ಎ. ರೈ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ರಶ್ಮಿ ಫೆರ್ನಾಂಡಿಸ್ ಹಾಗೂ ಯಜ್ಞೇಶ್ವರಿ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು