6:36 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯ‌ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

09/12/2023, 12:16

ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಬಾಲವಿಕಾಸ ಶಾಲೆಯು ಇದೀಗ ಎಲ್ಲಾ ಸೌಕರ್ಯಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ವಿಸ್ತಾರವಾದ ಆಟದ ಮೈದಾನವನ್ನು ಹೊಂದಿದ್ದು ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ‌, ಶಾಲಾ ವಿದ್ಯಾರ್ಥಿಗಳು ಈ ಸೌಕರ್ಯಗಳನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರು”ಇಂದಿನ ಮಕ್ಕಳಿಗೆ ವ್ಯಾಯಾಮದ ಅಗತ್ಯವಿದೆ, ಅದು ಕ್ರೀಡೆಯಲ್ಲಿ ದೊರೆಯುತ್ತದೆ.ಶಿಕ್ಷಣ ಎಂದರೆ ಕೇವಲ‌ ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಪ್ರತಿಭೆಯ ಅನ್ವೇಷಣೆಯೂ ಶಿಕ್ಷಣವಾಗಿದೆ”ಎಂದರು. ಕ್ರೀಡೋತ್ಸವದಲ್ಲಿ ಕ್ರೀಡಾ ಜ್ಯೋತಿಯ ಆಗಮನ ಹಾಗೂ ಆಕರ್ಷಣೀಯ ಪಥಸಂಚಲನವು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕಿ ಮೋಹಿನಿ ಎ. ರೈ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ರಶ್ಮಿ ಫೆರ್ನಾಂಡಿಸ್ ಹಾಗೂ ಯಜ್ಞೇಶ್ವರಿ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು