3:00 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

09/12/2023, 22:32

ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಉದ್ಘಾಟನೆ ನೆರವೇರಿಸಿ ಮಾತಾಡಿದ ಡಾ.ವೈ. ಭರತ್ ಶೆಟ್ಟಿ ಅವರು “ಬಾಡಿ ಬಿಲ್ಡರ್ಗಳಿಗೆ ನಿರ್ದಿಷ್ಟ ನಿಯಮಗಳು ಅಗತ್ಯವಾಗಿದೆ. ತೆಗೆದುಕೊಳ್ಳುವ ಆಹಾರ, ಸಪ್ಲಿಮೆಂಟ್ ಗಳಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ದೇಹದಾರ್ಡ್ಯ ಅನ್ನುವುದು ಸುಲಭದ ಮಾತಲ್ಲ. ಇನ್ನು ಇಂತಹ ಸ್ಪರ್ಧೆ ಆಯೋಜನೆ ಮಾಡುವುದು ಕೂಡ ಕಷ್ಟ. ಯಾಕೆಂದರೆ ದೇಶದಲ್ಲಿ ಕ್ರಿಕೆಟ್ ನಂತಹ ಕ್ರೀಡೆಗಳಿಗೆ ಇರುವಷ್ಟು ಪ್ರೋತ್ಸಾಹ ಇಂತಹ ಕ್ರೀಡೆಗಳಿಗಿಲ್ಲ. ಹೀಗಿದ್ದರೂ ಪುಂಡಲೀಕ ಹೊಸಬೆಟ್ಟು ಮತ್ತವರ ತಂಡ ಸಾಕಷ್ಟು ಶ್ರಮವಹಿಸಿ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂದೆಯೂ ಇಂತಹ ಸ್ಪರ್ಧೆ ನಿತ್ಯ ನಿರಂತರವಾಗಿ ನಡೆಯಲಿ” ಎಂದು ಶುಭ ಹಾರೈಸಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಜಿ. ಶಂಕರ್ , ಸ್ಪರ್ಧಾ ಸಮಿತಿ ಅಧ್ಯಕ್ಷ ಪುಂಡಲೀಕ ಹೊಸಬೆಟ್ಟು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು