11:59 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

09/12/2023, 22:32

ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಉದ್ಘಾಟನೆ ನೆರವೇರಿಸಿ ಮಾತಾಡಿದ ಡಾ.ವೈ. ಭರತ್ ಶೆಟ್ಟಿ ಅವರು “ಬಾಡಿ ಬಿಲ್ಡರ್ಗಳಿಗೆ ನಿರ್ದಿಷ್ಟ ನಿಯಮಗಳು ಅಗತ್ಯವಾಗಿದೆ. ತೆಗೆದುಕೊಳ್ಳುವ ಆಹಾರ, ಸಪ್ಲಿಮೆಂಟ್ ಗಳಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ದೇಹದಾರ್ಡ್ಯ ಅನ್ನುವುದು ಸುಲಭದ ಮಾತಲ್ಲ. ಇನ್ನು ಇಂತಹ ಸ್ಪರ್ಧೆ ಆಯೋಜನೆ ಮಾಡುವುದು ಕೂಡ ಕಷ್ಟ. ಯಾಕೆಂದರೆ ದೇಶದಲ್ಲಿ ಕ್ರಿಕೆಟ್ ನಂತಹ ಕ್ರೀಡೆಗಳಿಗೆ ಇರುವಷ್ಟು ಪ್ರೋತ್ಸಾಹ ಇಂತಹ ಕ್ರೀಡೆಗಳಿಗಿಲ್ಲ. ಹೀಗಿದ್ದರೂ ಪುಂಡಲೀಕ ಹೊಸಬೆಟ್ಟು ಮತ್ತವರ ತಂಡ ಸಾಕಷ್ಟು ಶ್ರಮವಹಿಸಿ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂದೆಯೂ ಇಂತಹ ಸ್ಪರ್ಧೆ ನಿತ್ಯ ನಿರಂತರವಾಗಿ ನಡೆಯಲಿ” ಎಂದು ಶುಭ ಹಾರೈಸಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಜಿ. ಶಂಕರ್ , ಸ್ಪರ್ಧಾ ಸಮಿತಿ ಅಧ್ಯಕ್ಷ ಪುಂಡಲೀಕ ಹೊಸಬೆಟ್ಟು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು