12:57 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು?

10/12/2023, 23:51

ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ, ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲರೂ ಸದಾ ಪಾಲಿಸೋಣ ಎಂದು ಸಂಘದ ಅಮೃತ ಮಹೋತ್ಸವಕ್ಕೆಗಣ್ಯರು
ಶುಭ ಕೋರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾಗ ನಟ ಶಿವರಾಜ್ ಕುಮಾರ್ ಅವರನ್ನು ಉದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ನಿಲ್ಲಲ್ಲು ಸಿದ್ಧರಾಗಿ ಎಂದು ಹೇಳಿದರು. ಆದರೆ ನಟ ಶಿವರಾಜ್ ಕುಮಾರ್ ಅವರು ಇದೇ ಸಮಾರಂಭದಲ್ಲಿ ಉತ್ತರ ನೀಡಿ, ತಂದೆಯವರು ಬಣ್ಣ ಮಾತ್ರ ಹಚ್ಚಬೇಕು. ಆ್ಯಕ್ಟ್ ಮಾತ್ರ ಮಾಡಬೇಕು. ನಟನೆಯ ಮೂಲಕ ಜನರನ್ನು ರಂಜಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳುತ್ತಿದ್ದರು ಎನ್ನುವ ಮೂಲಕ ನಯವಾಗಿ ರಾಜಕೀಯವನ್ನು
ನಿರಾಕರಿಸಿದರು. ಪತ್ನಿ ಗೀತಾಗೆ ರಾಜಕೀಯದ ಬಗ್ಗೆ ಒಲವಿದೆ. ಅವರು ಈ ಹಾದಿಯಲ್ಲಿ ಮುಂದುವರಿಯಲಿ ಎಂದು ಶಿವರಾಜ್ ಕುಮಾರ್ ಹೇಳಲು ಮರೆಯಲಿಲ್ಲ.
ವರನಟ ರಾಜ್ ಕುಮಾರ್ ಅವರಿಗೂ ಪ್ರಮುಖ ರಾಜಕೀಯ ಪಕ್ಷಗಳು ಆಫರ್ ನೀಡಿತ್ತು. ಆದರೆ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಲು ನಿರಾಕರಿಸಿದ್ದರು. ರಾಜ್ ಕುಮಾರ್ ಅವರು ಮನಸ್ಸು ಮಾಡುತ್ತಿದ್ದರೆ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ನಟನಾಗಿ ರಾಜಕೀಯ ಪ್ರವೇಶಿಸುವುದನ್ನು ಒಪ್ಪುತ್ತಿರಲಿಲ್ಲ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ‌ ಶಿಕ್ಷಣ ಹಾಗೂ ಸಾಕ್ಷರತಾ‌ ಇಲಾಖೆ‌ ಸಚಿವ ಎಸ್.ಮಧು ಬಂಗಾರಪ್ಪ, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ,
ನಟರಾದ ಡಾ.ಶಿವರಾಜ್ ಕುಮಾರ್, ಶ್ರೀಮುರುಳಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಾಸಕ ಎಚ್.ಆರ್ ಗವಿಯಪ್ಪ, ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ , ಸಮಾಜದ ಅನೇಕ ಸ್ವಾಮೀಜಿಗಳು ಮತ್ತು ಸಮಾಜದ ಅನೇಕ ಮುಖಂಡರುಗಳು,ಮಾಜಿ ಶಾಸಕರು, ಮಾಜಿ ಸಚಿವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು