3:02 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು?

10/12/2023, 23:51

ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ, ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲರೂ ಸದಾ ಪಾಲಿಸೋಣ ಎಂದು ಸಂಘದ ಅಮೃತ ಮಹೋತ್ಸವಕ್ಕೆಗಣ್ಯರು
ಶುಭ ಕೋರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾಗ ನಟ ಶಿವರಾಜ್ ಕುಮಾರ್ ಅವರನ್ನು ಉದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ನಿಲ್ಲಲ್ಲು ಸಿದ್ಧರಾಗಿ ಎಂದು ಹೇಳಿದರು. ಆದರೆ ನಟ ಶಿವರಾಜ್ ಕುಮಾರ್ ಅವರು ಇದೇ ಸಮಾರಂಭದಲ್ಲಿ ಉತ್ತರ ನೀಡಿ, ತಂದೆಯವರು ಬಣ್ಣ ಮಾತ್ರ ಹಚ್ಚಬೇಕು. ಆ್ಯಕ್ಟ್ ಮಾತ್ರ ಮಾಡಬೇಕು. ನಟನೆಯ ಮೂಲಕ ಜನರನ್ನು ರಂಜಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳುತ್ತಿದ್ದರು ಎನ್ನುವ ಮೂಲಕ ನಯವಾಗಿ ರಾಜಕೀಯವನ್ನು
ನಿರಾಕರಿಸಿದರು. ಪತ್ನಿ ಗೀತಾಗೆ ರಾಜಕೀಯದ ಬಗ್ಗೆ ಒಲವಿದೆ. ಅವರು ಈ ಹಾದಿಯಲ್ಲಿ ಮುಂದುವರಿಯಲಿ ಎಂದು ಶಿವರಾಜ್ ಕುಮಾರ್ ಹೇಳಲು ಮರೆಯಲಿಲ್ಲ.
ವರನಟ ರಾಜ್ ಕುಮಾರ್ ಅವರಿಗೂ ಪ್ರಮುಖ ರಾಜಕೀಯ ಪಕ್ಷಗಳು ಆಫರ್ ನೀಡಿತ್ತು. ಆದರೆ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಲು ನಿರಾಕರಿಸಿದ್ದರು. ರಾಜ್ ಕುಮಾರ್ ಅವರು ಮನಸ್ಸು ಮಾಡುತ್ತಿದ್ದರೆ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ನಟನಾಗಿ ರಾಜಕೀಯ ಪ್ರವೇಶಿಸುವುದನ್ನು ಒಪ್ಪುತ್ತಿರಲಿಲ್ಲ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ‌ ಶಿಕ್ಷಣ ಹಾಗೂ ಸಾಕ್ಷರತಾ‌ ಇಲಾಖೆ‌ ಸಚಿವ ಎಸ್.ಮಧು ಬಂಗಾರಪ್ಪ, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ,
ನಟರಾದ ಡಾ.ಶಿವರಾಜ್ ಕುಮಾರ್, ಶ್ರೀಮುರುಳಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಾಸಕ ಎಚ್.ಆರ್ ಗವಿಯಪ್ಪ, ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ , ಸಮಾಜದ ಅನೇಕ ಸ್ವಾಮೀಜಿಗಳು ಮತ್ತು ಸಮಾಜದ ಅನೇಕ ಮುಖಂಡರುಗಳು,ಮಾಜಿ ಶಾಸಕರು, ಮಾಜಿ ಸಚಿವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು