2:24 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು?

10/12/2023, 23:51

ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ, ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲರೂ ಸದಾ ಪಾಲಿಸೋಣ ಎಂದು ಸಂಘದ ಅಮೃತ ಮಹೋತ್ಸವಕ್ಕೆಗಣ್ಯರು
ಶುಭ ಕೋರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾಗ ನಟ ಶಿವರಾಜ್ ಕುಮಾರ್ ಅವರನ್ನು ಉದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ನಿಲ್ಲಲ್ಲು ಸಿದ್ಧರಾಗಿ ಎಂದು ಹೇಳಿದರು. ಆದರೆ ನಟ ಶಿವರಾಜ್ ಕುಮಾರ್ ಅವರು ಇದೇ ಸಮಾರಂಭದಲ್ಲಿ ಉತ್ತರ ನೀಡಿ, ತಂದೆಯವರು ಬಣ್ಣ ಮಾತ್ರ ಹಚ್ಚಬೇಕು. ಆ್ಯಕ್ಟ್ ಮಾತ್ರ ಮಾಡಬೇಕು. ನಟನೆಯ ಮೂಲಕ ಜನರನ್ನು ರಂಜಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳುತ್ತಿದ್ದರು ಎನ್ನುವ ಮೂಲಕ ನಯವಾಗಿ ರಾಜಕೀಯವನ್ನು
ನಿರಾಕರಿಸಿದರು. ಪತ್ನಿ ಗೀತಾಗೆ ರಾಜಕೀಯದ ಬಗ್ಗೆ ಒಲವಿದೆ. ಅವರು ಈ ಹಾದಿಯಲ್ಲಿ ಮುಂದುವರಿಯಲಿ ಎಂದು ಶಿವರಾಜ್ ಕುಮಾರ್ ಹೇಳಲು ಮರೆಯಲಿಲ್ಲ.
ವರನಟ ರಾಜ್ ಕುಮಾರ್ ಅವರಿಗೂ ಪ್ರಮುಖ ರಾಜಕೀಯ ಪಕ್ಷಗಳು ಆಫರ್ ನೀಡಿತ್ತು. ಆದರೆ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಲು ನಿರಾಕರಿಸಿದ್ದರು. ರಾಜ್ ಕುಮಾರ್ ಅವರು ಮನಸ್ಸು ಮಾಡುತ್ತಿದ್ದರೆ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ನಟನಾಗಿ ರಾಜಕೀಯ ಪ್ರವೇಶಿಸುವುದನ್ನು ಒಪ್ಪುತ್ತಿರಲಿಲ್ಲ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ‌ ಶಿಕ್ಷಣ ಹಾಗೂ ಸಾಕ್ಷರತಾ‌ ಇಲಾಖೆ‌ ಸಚಿವ ಎಸ್.ಮಧು ಬಂಗಾರಪ್ಪ, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ,
ನಟರಾದ ಡಾ.ಶಿವರಾಜ್ ಕುಮಾರ್, ಶ್ರೀಮುರುಳಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಾಸಕ ಎಚ್.ಆರ್ ಗವಿಯಪ್ಪ, ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ , ಸಮಾಜದ ಅನೇಕ ಸ್ವಾಮೀಜಿಗಳು ಮತ್ತು ಸಮಾಜದ ಅನೇಕ ಮುಖಂಡರುಗಳು,ಮಾಜಿ ಶಾಸಕರು, ಮಾಜಿ ಸಚಿವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು