12:48 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕುಲಶೇಖರ ಹೋಲಿ ಕ್ರಾಸ್ ಚರ್ಚ್ ಶತಮಾನೋತ್ತರ ಸುವರ್ಣ ಮಹೋತ್ಸವ ಮತ್ತು ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯತಿಥಿ: ಹೊರೆ ಕಾಣಿಕೆ ಮೆರವಣಿಗೆ

10/12/2023, 23:56

ಮಂಗಳೂರು(reporterkarnataka.com): ಮಂಗಳೂರಿನ ಕುಲಶೇಖರದ ಕೋರ್ಡೆಲ್‌ ನ ಹೋಲಿ ಕ್ರಾಸ್ ಚರ್ಚ್‌ನ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಚರ್ಚ್‌ನ ಸಂಸ್ಥಾಪಕ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146 ನೇ ಪುಣ್ಯತಿಥಿ ಆಚರಣೆ ಹಾಗೂ ಅನ್ನ ಸಂತರ್ಪಣೆ ಡಿಸೆಂಬರ್‌ 11ರಂದು ಸೋಮವಾರ ನಡೆಯಲಿದ್ದು, ಆ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆಯು ಭಾನುವಾರ ನಡೆಯಿತು.

ಬಿಕರ್ನಕಟ್ಟೆಯ ಬಾಲಯೇಸು ಪುಣ್ಯ ಕ್ಷೇತ್ರದ ಆವರಣದಿಂದ ಹೊರಟ ಹೊರೆ ಕಾಣಿಕೆ ಮೆರವಣಿಗೆಯಲ್ಲಿ 11 ವಲಯಗಳ ತಲಾ 4 ವಾರ್ಡ್ ಗಳ ಸಹಸ್ರಾರು ಮಂದಿ ಭಕ್ತರು ಭಾಗವಹಿಸಿದ್ದರು.
ಕುಲ್ಯರ್ದ ಅಜ್ಜೆರ್‌ ಎಂದೇ ಖ್ಯಾತಿವೆತ್ತ ಫಾ. ಅಲೆಕ್ಸಾಂಡರ್ ಡುಬೋಯ್‌ ಅವರ 146ನೇ ಪುಣ್ಯಸ್ಮರಣೆಯ ಪ್ರಯುಕ್ತ ಡಿಸೆಂಬರ್ 11ರಂದು ಸೋಮವಾರ ಸಂಜೆ 5.30ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ. ಬಿಷಪ್‌ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನೇತೃತ್ವ ವಹಿಸುವರು. ಸಂಜೆ 7.00 ಗಂಟೆಗೆ ಪರಮ ಪ್ರಸಾದದ ಮೆರವಣಿಗೆ ನಡೆಯಲಿದೆ. ಬಳಿಕ ಎಲ್ಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಲಶೇಖರ ಚರ್ಚಿನ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು