3:01 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು