12:01 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು